SSLC ಪೂರಕ ಪರೀಕ್ಷೆ ಯಾವಾಗ?|ಶಾಲಾ ಕಾಲೇಜುಗಳ ಆರಂಭ ಯಾವಾಗ? |ಶಿಕ್ಷಣ ಸಚಿವರ ಹೇಳಿಕೆ |
ಕರ್ನಾಟಕ ರಾಜ್ಯದಲ್ಲಿ ಕೋರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಇದುವರೆಗೂ ಶಾಲಾ-ಕಾಲೇಜುಗಳನ್ನು ತೆರೆಯುವುದರ ಬಗ್ಗೆ ತೀರ್ಮಾನ ಕೈಗೊಂಡಿಲ್ಲ ಅಗಸ್ಟ್ ತಿಂಗಳ ನಂತರ ಈ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರ
.
ನಗರದ 10ನೇ ತರಗತಿಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು ಶಾಲೆ ಆರಂಭಿಸುವ ಕುರಿತು ಈಗಾಗಲೇ ಪೋಷಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಅದನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಾಗಿದೆ ಮತ್ತು ಅಗಸ್ಟ್ ತಿಂಗಳ ನಂತರ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ತಜ್ಞರ ಸಮಿತಿಗೆ ಚರ್ಚಿಸಿ ನಂತರ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದರು.
ಜಾಹಿರಾತು :
🌷🌷ಪ್ರೀತಿಯಲ್ಲಿ ನಂಬಿ ಮೋಸ ,ವಿದ್ಯಾಭ್ಯಾಸ ತೊಂದರೆ ,ಆರೋಗ್ಯ ಅಭಿವೃದ್ಧಿ, ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಹಣಕಾಸಿನ ಸಮಸ್ಯೆ, ವ್ಯಾಪಾರ ಅಭಿವೃದ್ಧಿ ,ಕೊಟ್ಟ ಹಣ ಮರಳಿ ಬರಲು, ಗಂಡ ಹೆಂಡತಿ ಸಮಸ್ಯೆ ,ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ತಕ್ಷಣ ಕರೆಮಾಡಿ +91 9611782270 🙏
ಆಗಸ್ಟ್ ನಂತರ ಶಾಲೆಗಳನ್ನು ಆರಂಭಿಸುವ ತೀರ್ಮಾನ ಕೈಗೊಂಡರೂ ಸಹ ಮೊದಲು ಹಂತವಾಗಿ ಪಿಯುಸಿ ತರಗತಿಗಳನ್ನು ನಡೆಸಲಾಗುತ್ತಿದೆ ನಂತರ ಪ್ರೌಢಶಾಲೆಗಳನ್ನು ಆರಂಭಿಸಲಾಗುವುದು ನಂತರ ಮಾಧ್ಯಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ನಡೆಸಲಾಗುವುದು ಅದರ ಬಗ್ಗೆ ಚಿಂತನೆ ನಡೆಸಲಾಗುವುದು ಅಂತ ಹೇಳುತ್ತಾರೆ.
10ನೇ ತರಗತಿಯ ಪೂರಕ ಪರೀಕ್ಷೆ ಯಾವಾಗ ಅಂತ ಕೇಳಿದಾಗ ಈ ಕೊರೋನಾ ಹಾವಳಿಯ ಸಮಸ್ಯೆಯ ನಡುವೆ ಶೇಕಡ 98ರಷ್ಟು ಮಕ್ಕಳು ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು ಕೇವಲ 32 ಮಂದಿ ವಿದ್ಯಾರ್ಥಿಗಳು ಮಾತ್ರ ಹಾಜರಾಗಿಲ್ಲ ಅಂತಹ ಅರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ಮಾಡಿಕೊಡಲಾಗುವುದು ಹಾಗೂ ಆಗಸ್ಟ್ನಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು ಅಂತ ಶಿಕ್ಷಣ ಸಚಿವರು ಹೇಳಿದ್ದಾರೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ